ಸಿದ್ದರಾಮಯ್ಯ ಅವರಿಗೆ ಸ್ಥಿರವಾದ ನೆಲೆ ಇಲ್ಲ: ಆರಗ ಜ್ಞಾನೇಂದ್ರ ವ್ಯಂಗ್ಯ

0

ಗಳೂರು: ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವ ವಿಚಾರ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ.

ಆದರೆ ಸಿದ್ದರಾಮಯ್ಯ ಈ ಹಿಂದೆ ಮುಖ್ಯಮಂತ್ರಿಯಾಗಿದ್ದವರು.

ಅವರಿಗೆ ಸ್ಥಿರವಾದ ನೆಲೆ ಇಲ್ಲ. ಕ್ಷೇತ್ರ ಬದಲಾಯಿಸುವುದಕ್ಕೆ ಕಾರಣ ಏನು ಅಂತಾ ಅವರೇ ತಿಳಿಸಬೇಕು ಎಂದು ವ್ಯಂಗ್ಯವಾಡಿದರು. ಇದೇ ವೇಳೆ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಪ್ರಜಾಪ್ರಭುತ್ವದಲ್ಲಿ ಪುಸ್ತಕ ಬಿಡುಗಡೆ, ಪ್ರಕಟಣೆ ಮಾಡಲು ಅವಕಾಶವಿದೆ. ಹಿಂದೆಲ್ಲ ಪ್ರಕಟಣೆ ಆಗಿದೆ. ಭಯಕ್ಕಾಗಿ ಈ ರೀತಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed