ಸಿದ್ದರಾಮಯ್ಯರಿಗೆ ಮೊಮ್ಮಕ್ಕಳನ್ನು ಪ್ರಚಾರಕ್ಕೆ ಕರೆದುಕೊಂಡು ಬರುವ ಸ್ಥಿತಿ ಬಂದಿದೆ: ಛಲವಾದಿ ನಾರಾಯಣಸ್ವಾಮಿ

0

ಬೆಂಗಳೂರು: ಚುನಾವಣಾ ಆಯೋಗದ ಬಗ್ಗೆ ಡಿಕೆಶಿಗೆ ನಂಬಿಕೆ ಇಲ್ಲ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಬಗ್ಗೆ ಡಿಕೆಶಿಗೆ ನಂಬಿಕೆ ಇಲ್ಲ.

ಅದಕ್ಕಾಗಿಯೇ ಸಹೋದರ ಡಿ.ಕೆ.ಸುರೇಶ್ ಕೈಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿಸಿದ್ದಾರೆ. ಪದ್ಮನಾಭ ನಗರದಲ್ಲಿ ನಾಮಪತ್ರ ಸಲ್ಲಿಸಲು ಸಮಯ ಸಿಗಲಿಲ್ಲವೆಂದು ಕಾಣುತ್ತದೆ ಎಂದರು. ಸಿದ್ದರಾಮಯ್ಯ ರಾಜ್ಯವೆಲ್ಲ ಸುತ್ತಿ ಮತ್ತೆ ವರುಣಕ್ಕೆ ಬಂದಿದ್ದಾರೆ. ಅಲ್ಲಿ ನಮ್ಮ ಅಭ್ಯರ್ಥಿ ಸೋಮಣ್ಣ ಗೆಲ್ಲುತ್ತಾರೆ. ಸಿದ್ದರಾಮಯ್ಯರಿಗೆ ಸೊಸೆ, ಮೊಮ್ಮಕ್ಕಳನ್ನು ಪ್ರಚಾರಕ್ಕೆ ಕರೆದುಕೊಂಡು ಬರುವ ಸ್ಥಿತಿ ಬಂದಿದೆ.

ರಾಜ್ಯದಲ್ಲಿ ಎಲ್ಲರನ್ನೂ ಗೆಲ್ಲಿಸುವ ಮಾತನಾಡಿದ ಅವರು, ತಮ್ಮನ್ನು ಗೆಲ್ಲಿಸಲು ಸೊಸೆ, ಮೊಮ್ಮಕ್ಕಳನ್ನು ಕರೆದುಕೊಂಡು ಬರಬೇಕಾದುದು ಎಂಥ ವಿಪರ್ಯಾಸ” ಎಂದು ಟೀಕಿಸಿದರು. ಎಲ್ಲರ ಶಾಪದಿಂದ ಸಿದ್ದರಾಮಯ್ಯ ಈ ಸಾರಿ ಸೋಲುತ್ತಾರೆ ಎಂದ ಅವರು, ಕಾಂಗ್ರೆಸ್ ಸಂಪೂರ್ಣ ದಿವಾಳಿಯಾಗಿದೆ. ಡಿ.ಕೆ.ಶಿವಕುಮಾರ್ ಅವರು ಸೋಲುವ ಭಯದಲ್ಲಿದ್ದಾರೆ ಎಂದು ತಿಳಿಸಿದರು. ನಮ್ಮ ಪಕ್ಷದ ಆರ್.ಅಶೋಕ್ ಅವರಿಗೆ ಜನಬೆಂಬಲ ಕಾಣುತ್ತಿದೆ. ತಮ್ಮ ಸೋದರನ ನಾಮಪತ್ರ ಹಾಕಿಸುವ ಮೂಲಕ ಅಶೋಕ್ ಅವರು ಗೆಲ್ಲುವ ಮುನ್ಸೂಚನೆಯನ್ನು ಡಿಕೆಶಿ ಅವರು ನೀಡಿದ್ದಾರೆ” ಎಂದು ತಿಳಿಸಿದರು.

About Author

Leave a Reply

Your email address will not be published. Required fields are marked *

You may have missed