ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ರಾಜ್ಯ ಬಿಜೆಪಿ: ಈ ಸರ್ಕಾರ ಸುಸ್ಥಿರವಾಗಿಲ್ಲವೆಂದು ಟ್ವೀಟ್

0

ಬೆಂಗಳೂರು: ಸಿಎಂ ಗಾದಿಗಾಗಿ ಗುದ್ದಾಟ ನಡೆದು ಕೊನೆಗೆ ಸಿದ್ದರಾಮಯ್ಯನವರು ರಾಜ್ಯದ ಸಿಎಂ ಆಗಿದ್ದಾರೆ ಈ ವೇಳೆ 5 ವರ್ಷ ಸಿದ್ದರಾಮಯ್ಯ ಸಿಎಂ ಎಂದು ಎಂ.ಬಿ.ಪಾಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ರಾಜ್ಯ ಬಿಜೆಪಿ ಪಕ್ಷ ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದೆ.

ಡಿ.ಕೆ.ಶಿವಕುಮಾರ್ ಸಿಎಂ ಆಗಲು ಸಿದ್ದರಾಮಯ್ಯ ಬಿಡುವುದಿಲ್ಲ. ಎಂ.ಬಿ.ಪಾಟೀಲ್ ಈ ಹೇಳಿಕೆ ಮೂಲಕ ಎಚ್ಚರಿಕೆ ರವಾನಿಸಿದ್ದಾರೆ ಅಷ್ಟೇ.

ಬಹುಮತ ದೊರಕಿದ ನಂತರದ ಎಲ್ಲ ಬೆಳವಣಿಗೆ ಗಮನಿಸಿದಾಗ ಈ ಸರ್ಕಾರ ಸುಸ್ಥಿರವಾಗಿರಲಿದೆ ಎಂಬ ಯಾವ ಲಕ್ಷಣವೂ ಕಾಣುತ್ತಿಲ್ಲ. ಹೈಕಮಾಂಡ್ಗೆ ಕಪ್ಪ ಪೂರೈಸಬೇಕಾದ ಮಾನದಂಡದಲ್ಲಿ ಈ ಸರ್ಕಾರ ರಚನೆಯಾಗಿದೆ ಎಂದು ಟ್ವೀಟ್ ಮೂಲಕ ಬಿಜೆಪಿ, ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದೆ.

About Author

Leave a Reply

Your email address will not be published. Required fields are marked *

You may have missed