ಗೆಲ್ಲುವ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಟಿಕೇಟ್ ನೀಡಬೇಕು: ಶಾಸಕ ದಿನೇಶ್ ಗುಂಡೂರಾವ್

0

ಬೆಂಗಳೂರು: ಬ್ರಾಹ್ಮಣರ ಬಗ್ಗೆ ಮಾತನಾಡಿದರೆ ಅವರ ಶಾಪ ತಟ್ಟದೆ ಬಿಡುವುದಿಲ್ಲ ಎಂದು ಶಾಸಕ ದಿನೇಶ್​ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಬ್ರಾಹ್ಮಣರಿಗೆ ಅವಹೇಳನ ಮಾಡಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬ್ರಾಹ್ಮಣ ಸಮುದಾಯದ ಕುರಿತು ಟೀಕಿಸಿರುವ ವಿಚಾರ ನನಗೆ ಗೊತ್ತಿಲ್ಲ. ಯಾಕೆ ಯಾವ ಉದ್ದೇಶದಿಂದ ಹೇಳಿದ್ದಾರೋ ಗೊತ್ತಿಲ್ಲ. ಅದನ್ನು ಕುಮಾರಸ್ವಾಮಿ ಅವರೇ ಹೇಳಬೇಕು. ಆ ರೀತಿ ಜಾತಿ ಹೆಸರನ್ನ ಇಟ್ಟುಕೊಂಡು ಮಾತನಾಡುವುದು ಮಾಜಿ ಮುಖ್ಯಮಂತ್ರಿ ಅವರಿಗೆ ಶೋಭೆ ತರಲ್ಲ.

ಒಂದು ಸಮುದಾಯವನ್ನು ಎಳೆ ತಂದು ಹಾಗೆ ಮಾತನಾಡುವುದು ಸರಿಯಲ್ಲ. ಎಲ್ಲಾ ಜಾತಿ ಸಮುದಾಯದಲ್ಲೂ ಅನೇಕ ಉಪ ಸಮುದಾಯಗಳು ಇದ್ದೇ ಇರ್ತಾವೆ ಎಂದು ಅಭಿಪ್ರಾಯಪಟ್ಟರು. ಇನ್ನೂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ ಮಾತನಾಡಿದ ದಿನೇಶ್​ ಗುಂಡೂರಾವ್, ಈಗಾಗಲೇ ಚುನಾವಣಾ ಸಮಿತಿ ಸಭೆ ಆಗಿದೆ. ಪಾರದರ್ಶಕ ಟಿಕೆಟ್ ಹಂಚಿಕೆ ಮಾಡಬೇಕಿದೆ. ಗೆಲ್ಲುವ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಟಿಕೇಟ್ ನೀಡಬೇಕು. ಸರ್ವೇ ಅಭಿಪ್ರಾಯ, ಕಾರ್ಯಕರ್ತರ ಅಭಿಪ್ರಾಯ ಪಡೆದು ಹಂಚಿಕೆ ಮಾಡ್ತೇವೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಅಸಮಾಧಾನ ಆಗದ ರೀತಿಯಲ್ಲಿ ಟಿಕೆಟ್ ಹಂಚಿಕೆ ಮಾಡ್ತೇವೆ ಎಂದು ಹೇಳಿದರು.

About Author

Leave a Reply

Your email address will not be published. Required fields are marked *

You may have missed