ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ: ಕರಂದ್ಲಾಜೆ ವಿರುದ್ಧ ಸಿದ್ದು ಕಿಡಿ

0

ಬೆಂಗಳೂರು: ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ ಎಂದು ಹೇಳುವ ಮೂಲಕ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸಿದ್ಧರಾಮಯ್ಯ(Siddaramaiah) ಗುಡುಗಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮೀಸ ಲಾತಿಯನ್ನು ಶೇಕಡಾ 75ಕ್ಕೆ ಹೆಚ್ಚಿಸಲು ಹೇಗೆ ಸಾಧ್ಯ?

ಎಂದು ಶೋಭಾ ಕರಂದ್ಲಾಜೆ (Shobha Karandlaje)ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಅವರ ಪಕ್ಷದ ಸರ್ಕಾರವೇ ಪರಿಶಿಷ್ಟ ಜಾತಿ/ಪಂಗಡದ ಮೀಸಲು ಹೆಚ್ಚಿಸಿ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 56ಕ್ಕೆ ಹೆಚ್ಚಿಸಿದ್ದು ಇವರ ಗಮನಕ್ಕೆ ಬಂದಿಲ್ಲ.

ಅಜ್ಞಾನಕ್ಕೆ ಮದ್ದಿಲ್ಲ ಎಂಬುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje)ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಗುಡುಗಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡಿ ಒಟ್ಟು ಮೀಸಲು ಪ್ರಮಾಣವನ್ನು ಶೇಕಡಾ 60ಕ್ಕೆ ಹೆಚ್ಚಿಸಿದ್ದು ಕೂಡಾ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಗೊತ್ತಿಲ್ಲ. ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed