ಶಾಸಕ ಪ್ರದೀಪ್ ಈಶ್ವರ್ಗೆ ಯುಟಿ ಖಾದರ್ ಸಲಹೆ
ಬೆಂಗಳೂರು ;- ಟ್ರೋಲ್ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿಶಾಸಕ ಪ್ರದೀಪ್ ಈಶ್ವರ್ಗೆ ಧೈರ್ಯ ಸ್ಪೀಕರ್ ಯುಟಿ ಖಾದರ್ ಧೈರ್ಯ ತುಂಬಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸ್ಪೀಕರ್, ಟ್ರೋಲ್ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನಾನು ಈ ಸ್ಪೀಕರ್ ಸ್ಥಾನದಲ್ಲಿ ಕೂರಲು ಟ್ರೋಲ್ ಮಾಡಿದವರು ಕಾರಣ.
ಅವರು ನಮ್ಮ ಬೆಳವಣಿಗೆಗೆ ಕಾರಣ ಆಗ್ತಾರೆ. ಹೊಸದಾಗಿ ಶಾಸಕರಾದಾಗ ಮಾತನಾಡುವುದು ಸಹಜ. ಹೆದರಿಕೆ ಬೇಡ ಧೈರ್ಯವಾಗಿ ಮಾತನಾಡಿ ಎಂದು ನೂತನ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಹುರಿದುಂಬಿಸಿದರು.
ಆತ್ಮವಿಶ್ವಾಸದಿಂದ ಮಾತನಾಡಿ, ಸಂವಿಧಾನ ಬದ್ಧವಾಗಿ ಮಾತನಾಡಿ ಅಷ್ಟೇ. ಹೆಚ್ಚು ಕಡಿಮೆ ಆದರೆ ಏನೂ ತೊಂದರೆ ಇಲ್ಲ. ಇದು ಪರೀಕ್ಷೆ ಹಾಲ್ ಅಥವಾ ನ್ಯಾಯಾಲಯ ಅಲ್ಲ. ಫ್ರೀ ಆಫ್ ಮೈಂಡ್ ಅಲ್ಲಿ ಮಾತನಾಡಿ ಎಂದು ಸಲಹೆ ನೀಡಿದರು.