ಮೇ 5ರಿಂದ 13 ರವರೆಗೆ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ

0

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆ(Karnataka Election) ಮೇ 5ರಿಂದ 13 ರವರೆಗೆ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ(Variation in transport bus traffic) ಉಂಟಾಗುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath)ಹೇಳಿದ್ದಾರೆ.

ಈ ಸಂಬಂಧ ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿದ ಅವರು, 5ರಿಂದ 13 ರವರೆಗೆ ಸಾರ್ವಜನಿಕರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಬಿಎಂಟಿಸಿ ಹಾಗೂ ಕೆಎಸ್‌ಆರ್ಟಿಸಿ ಬಸ್ಗಳ ಜತೆಗೆ ಆರ್ಟಿಒ ವಾಹನಗಳನ್ನೂ ಸಹ ಬಳಸಿಕೊಳ್ಳಲಾಗುತ್ತಿದೆ.

ಚುನಾವಣಾ ಹಾಗೂ ಭದ್ರತಾ ಸಿಬ್ಬಂದಿಗಳನ್ನು ಕರೆದೊಯ್ಯಲು ಮತ್ತು ಚುನಾವಣಾ ಪರಿಕರಗಳನ್ನು ರವಾನಿಸಲು ಸರ್ಕಾರಿ ಬಸ್ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಮೇ 5ರಿಂದ 13ರವರೆಗೆ ಚುನಾವಣಾ ಕೆಲಸಕ್ಕೆ ಬಸ್ ಗಳ ಅವಶ್ಯಕತೆಯಿದ್ದು, ಹೀಗಾಗಿ ಕೆಎಸ್‌ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳನ್ನು ಮುಂಗಡವಾಗಿ ಕಾಯ್ದಿರಿಸಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಹಾಗೂ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು

About Author

Leave a Reply

Your email address will not be published. Required fields are marked *

You may have missed