ಬೆಂಗಳೂರಿನಲ್ಲಿ ವರುಣನ ಅಬ್ಬರ: ಭಾರೀ ಮಳೆಗೆ ಕೆರೆಯಂತಾದ ಹೊಸೂರು ಹೆದ್ದಾರಿ

0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Hevvy Rain in Bangalore) ನಿನ್ನೆ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಅದರಂತೆ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ನಗರದ ಹಲವೆಡೆ ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಹೊಸೂರು ಹೆದ್ದಾರಿಗೆ ಮಳೆ ನೀರು ನುಗ್ಗಿ ವಾಹನ ಸವಾರರ ಪರದಾಡುವಂತಾಯಿತು.

ಹೊಸೂರು ರಸ್ತೆ ಜಲಾವೃತಗೊಂಡಿದ್ದರಿಂದ ಹತ್ತಾರು ಕಿ.ಮೀ ದೂರ ಟ್ರಾಫಿಕ್ ಜಾಮ್​ ಆಗಿ, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಎಲೆಕ್ಟ್ರಾನಿಕ್ ಸಿಟಿಯಿಂದ ಬೊಮ್ಮಸಂದ್ರದವರೆಗೆ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದರು. ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರ ಸಿಗ್ನಲ್ ಬಳಿ ಜಲಾವೃತಗೊಂಡಿತ್ತು.

ಪ್ರತಿ ಬಾರಿ ಮಳೆಯಾದಾಗಲೆಲ್ಲ ವೀರಸಂದ್ರ ಸಿಗ್ನಲ್ ಬಳಿ ಹೆದ್ದಾರಿ ಜಲಾವೃತಗೊಳ್ಳುತ್ತದೆ. ಆದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಹೆದ್ದಾರಿಯಲ್ಲಿ ನೀರು ತುಂಬಿ ಕೆಸರು ಗದ್ದೆಯಂತಾಗಿದ್ದ ರಸ್ತೆಯಲ್ಲಿ ಮಳೆ ನೀರನ್ನು ತೆರವು ಮಾಡುವ ಮೂಲಕ ಟ್ರಾಫಿಕ್ ಪೋಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ರಸ್ತೆಯಲ್ಲಿ ಪೊಲೀಸರು ಕೆಲಸ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed