ಪ್ರತಿ ಹಳ್ಳಿಯಲ್ಲೂ ಬಿಜೆಪಿ ದುರಾಡಳಿತದ ವಿರುದ್ಧ ಧ್ವನಿ ಕೇಳಿ ಬರುತ್ತಿದೆ: ರಾಮಲಿಂಗಾರೆಡ್ಡಿ

0

ಬೆಂಗಳೂರು: ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆಯಿದೆ ಎಂದು ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ(Ramalinga Reddy) ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಅನ್ಯ ಪಕ್ಷದ ಹಲವು ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು. 40% ಭ್ರಷ್ಠಾಚಾರ, ನೇಮಕಾತಿಗಳ ಹಗರಣ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯ ಬಿಜೆಪಿ(BJP) ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ.

ಪ್ರತಿ ಹಳ್ಳಿಯಲ್ಲೂ ಬಿಜೆಪಿ ದುರಾಡಳಿತದ ವಿರುದ್ಧ ಧ್ವನಿ ಕೇಳಿ ಬರುತ್ತಿದೆ. ಬಿಜೆಪಿ ನಮ್ಮ ಜೀವನವೇ ಹಾಳು ಮಾಡಿದೆ.

ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ಕೇಂದ್ರದ ಮೋದಿ ಸರ್ಕಾರ ದೊಡ್ಡ ದೊಡ್ಡ ವ್ಯಾಪಾರಸ್ತರ ಕೈಗೊಂಬೆಯಾಗಿ ಸರ್ಕಾರ ನಡೆಸುತ್ತಿದ್ದು, ಅವರ 12 ಲಕ್ಷ ಕೋಟಿ ಸಾಲಮನ್ನಾ ಮಾಡಿದೆ ಅದೇರೀತಿ 2014ರಿಂದ 2023ವರೆಗೆ ಕೇಂದ್ರ ಸರ್ಕಾರ 103 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದರಿಂದ ಬಡವರ ಬದುಕು ಬೀದಿಗೆ ಬಂದಂತಾಗಿದೆ, ಆದರೆ ರೈತರ ಸಂಕಷ್ಟವನ್ನು ಅರಿಯುವಲ್ಲಿ ಡಬಲ್ ಎಂಜಿನ್ ವಿಫಲವಾಗಿದೆ’ ಎಂದು ಆರೋಪಿಸಿದರು.

About Author

Leave a Reply

Your email address will not be published. Required fields are marked *

You may have missed