2 ವರ್ಷಗಳಲ್ಲಿ 85 ಕೋಮು ಹಿಂಸೆಯ ಪ್ರಕರಣಗಳು ನಡೆಯಲು ಕಾರಣಗಳೇನು?: ಜೆಡಿಎಸ್ ಪ್ರಶ್ನೆ
ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ 85 ಕೋಮು ಹಿಂಸೆಯ ಪ್ರಕರಣಗಳು ನಡೆಯಲು ಕಾರಣಗಳೇನು? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಜೆಡಿಎಸ್ ಪ್ರಶ್ನಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೆ,
ಕಳೆದ ಎರಡು ವರ್ಷಗಳಲ್ಲಿ 85 ಕೋಮು ಹಿಂಸೆಯ ಪ್ರಕರಣಗಳು ನಡೆಯಲು ಕಾರಣಗಳೇನು? ಹಿಂಸೆಗೆ ಬೌದ್ಧಿಕ ಚೌಕಟ್ಟು ನೀಡುವ ನಿಮ್ಮ ಶಾಸಕ, ಸಚಿವರುಗಳಲ್ಲವೆ? ನಿಮ್ಮ ಪಕ್ಷದ ಸಂಘಟನೆಗಳು ಮತ್ತದರ ಕಾರ್ಯಕರ್ತರ ವಿರುದ್ಧ ಕ್ರಮ ಯಾವಾಗ? ಎಂದು ಜೆಡಿಎಸ್ ಪ್ರಶ್ನಿಸಿದೆ. ಸೌಹಾರ್ದತೆ, ಸಹಬಾಳ್ವೆಗೆ ಹೆಸರಾದ ಕರ್ನಾಟವು ರಾಜ್ಯ BJP ಸರ್ಕಾರದ ನಾಲ್ಕು ವರ್ಷದ ಅವಧಿಯಲ್ಲಿ ಕೋಮು ದಳ್ಳುರಿಗೆ ಸುಡುತ್ತಿದೆ ಎಂದು ಜೆಡಿಎಸ್ ಕಿಡಿಕಾರಿದೆ.