ಅಸಮಾಧಾನಗೊಂಡಿದ್ದ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು..?

0

ಬೆಂಗಳೂರು: ಸಾರಿಗೆ ಖಾತೆ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಸಚಿವ ರಾಮಲಿಂಗಾರೆಡ್ಡಿ(ramalinga reddy) ಅವರನ್ನು ಮನವೊಲಿಸುವಲ್ಲಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಯಶಸ್ವಿಯಾಗಿದ್ದಾರೆ. ಇನ್ನು ರಾಮಲಿಂಗರೆಡ್ಡಿ ಅವರಿಗೆ ಸಾರಿಗೆ ಜೊತೆ ಮುಜರಾಯಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಸ್ವತಃ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರತಿಕ್ರಿಯಿಸಿದ್ದು, ಸಮಾಧಾನ,ಅಸಮಾಧಾನ ಪ್ರಶ್ನೆ ಇಲ್ಲ. ಯಾವ ಖಾತೆ ಕೊಟ್ಟರು ಕೆಲಸ ಮಾಡಬೇಕು. ಸಚಿವ ಸ್ಥಾನ, ಖಾತೆ ಎನ್ನುವುದು ಶಾಶ್ವತ ಅಲ್ಲ. ಮಂತ್ರಿಗಳು ಕೂಡ ಬದಲಾಗುತ್ತಾರೆ. ಖಾತೆ ಕೂಡ ಬದಲಾಗುತ್ತೆ. ಸಚಿವ ಸ್ಥಾನಕ್ಕೆ ನಾನು ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಬೇಕಿದ್ರೆ ಸಿದ್ದರಾಮಯ್ಯರವರನ್ನೇ ಕೇಳಿ.

ಈ ಹಿಂದೆ ನಾಲ್ಕು ತಿಂಗಳು ಸಾರಿಗೆ ಇಲಾಖೆಯ ಸಚಿವನಾಗಿದ್ದೆ. ಹಲವು ಪ್ರಶಸ್ತಿ ನಮ್ಮ ಸಂಸ್ಥೆಗೆ ಬಂದಿದ್ದವು ಎಂದು ಹೇಳಿದರು. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು ತೀರ್ಮಾನಿಸಲಾಗಿದೆ. ಎಷ್ಟು ಜನ ಪ್ರಯಾಣ ಮಾಡುತ್ತಾರೆ ಎನ್ನುವುದಕ್ಕೆ ಸರ್ಕಾರ ಕೆಆರ್​ಟಿ‌ಸಿಗೆ ಹಣ ಕೊಡಬೇಕು. ಸೋಮವಾರ ಸಭೆ ಇದ್ದು, ಎಲ್ಲಾ ತೀರ್ಮಾನಿಸಲಾಗುತ್ತೆ/ ವಿರೋಧ ಪಕ್ಷದವರ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

About Author

Leave a Reply

Your email address will not be published. Required fields are marked *

You may have missed