ಬಿಜೆಪಿ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವುದೇಕೆ?: ರಾಜ್ಯ ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ಬಿಜೆಪಿ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವುದೇಕೆ? ಎಂದು ರಾಜ್ಯ ಕಾಂಗ್ರೆಸ್(congress) ಪ್ರಶ್ನಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೇಕೆದಾಟು ವಿಚಾರದಲ್ಲಿ(Goat hunting issue) ಕರ್ನಾಟಕದ ವಿರುದ್ಧದ ನಿಲುವು ಹೊಂದಿದ್ದ ಅಣ್ಣಾಮಲೈ ಅವರನ್ನು ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ನೇಮಿಸುವ ಮೂಲಕ ಬಿಜೆಪಿ ಕನ್ನಡಿಗರ ಸ್ವಾಭಿಮಾನವನ್ನು ಅಣಕವಾಡಿದೆ.
ಈಗ ಅಣ್ಣಾಮಲೈ ಮೆಚ್ಚಿಸಲು ಕರ್ನಾಟಕದ ನಾಡಗೀತೆಯ ಬದಲು ತಮಿಳುನಾಡಿನ ನಾಡಗೀತೆ ಹಾಡಲಾಗಿದೆ. ಬಿಜೆಪಿ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವುದೇಕೆ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಟ್ವಿಟ್ ನಲ್ಲಿ ಪ್ರಶ್ನಿಸಿದೆ. ಮೈಸೂರನ್ನು ಪ್ಯಾರಿಸ್ ಮಾಡುತ್ತೇನೆ ಎಂದಿದ್ದ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಟೀಕಿಸಿದ್ದಾರೆ.
ನಮ್ಮ ಗ್ಯಾರಂಟಿಗಳನ್ನು ಈಡೇರಿಸಲಾಗದಿದ್ದರೆ ಸರ್ಕಾರ ವಿಸರ್ಜಿಸುತ್ತೇವೆ ಎಂಬ ವಾಗ್ದಾನ ಮಾಡುತ್ತೇವೆ. 20 ಲಕ್ಷ ಕೋಟಿ ಪ್ಯಾಕೆಟ್ ಎಂಬ ಬಿಳಿ ಕಾಗೆ ಹಾರಿಸಿದ ಅವರು ಯಾವ ರೀತಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತಾರೆ ಹೇಳಲಿ ಎಂದು ಸವಾಲ್ ಹಾಕಿದೆ. ನರೇಂದ್ರ ಮೋದಿಯವರೇ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ 261 ಭರವಸೆಗಳೆಲ್ಲವನ್ನೂ ಈಡೇರಿಸಿದ ಇತಿಹಾಸ ಹೊಂದಿದೆ. ಹಾಗೆಯೇ ಬಿಜೆಪಿ ಸರ್ಕಾರ 90% ಭರವಸೆಗಳನ್ನು ವಂಚಿಸಿದೆ. ನಿಮಗೆ ತಾಕತ್ತಿದ್ದರೆ ಕಳೆದ ಬಾರಿ ತಮ್ಮ ಪಕ್ಷ ನೀಡಿದ್ದ ಭರವಸೆಗಳ ಬಗ್ಗೆ ಮಾತಾಡಿ ಎಂಬುದಾಗಿ ಪ್ರಶ್ನಿಸಿದೆ.